Menu Close

ಕಥೊಲಿಕ ಶಿಕ್ಷಣ ಮಂಡಳಿ ಶಿಕ್ಷಕರಿಗೆ ೫ ದಿನಗಳ ಕಮ್ಯುನಿಕೇಟಿವ್ ಇಂಗ್ಲಿಷ್ ಕೋರ್ಸ್ ಪ್ರಾರಂಭ

[foogallery id=”2877″]

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಆಧೀನದ ಕಥೊಲಿಕ್ ಶಿಕ್ಷಣ ಮಂಡಳಿ (ಸಿಬಿಇ)ಯ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳಲ್ಲಿ ಭೋಧಿಸುವ ಶಿಕ್ಷಕರಿಗಾಗಿ ೫ ದಿನಗಳ ಕಮ್ಯುನಿಕೇಟಿವ್ ಇಂಗ್ಲಿಷ್ ಕೋರ್ಸ್ ಅನ್ನು ಏಪ್ರಿಲ್ ೧೭, ೨೦೨೩ ರಂದು ಮಂಗಳೂರಿನ ಪಾದುವಾ ಕಾಲೇಜಿನಲ್ಲಿ ಪ್ರಾರಂಭಿಸಲಾಯಿತು.

ಕಥೊಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂದನೀಯ ಫಾದರ್ ಆ್ಯಂಟನಿ ಸೆರಾ ಅವರು ಮಾತಾನಾಡುತ್ತಾ, “ಇಂಗ್ಲಿಷ್ ಮಾಧ್ಯಮ ಶಿಕ್ಷಕರಲ್ಲಿ ಸಂವಹನ ಕೌಶಲ್ಯವನ್ನು ಹೆಚ್ಚಿಸುವುದು, ಮತ್ತು ವಿದ್ಯಾರ್ಥಿಗಳೊಂದಿಗೆ ಮತ್ತು ಅವರ ಪೋಷಕರೊಂದಿಗೆ ಪರಿಣಾಮಕಾರಿಯಾಗಿ ಸಂವಹನ ನಡೆಸಲು ಅನುಕೂಲವಾಗುವಂತಹ ತರಬೇತಿ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.” ಎಂದು ಹೇಳಿದರು.

“ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ, ಶಿಕ್ಷಕರು ಇಂಗ್ಲಿಷ್‌ನಲ್ಲಿ ಮುಕ್ತ ಸಂವಹನವು ಮಾಡುವುದರಿಂದ ಕಷ್ಟಕರವಾದ ತರಗತಿಯ ವಾತಾವರಣವನ್ನು ಧನಾತ್ಮಕವಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ.” ಎಂದು ಫಾದರ್ ಸೆರಾ ಹೇಳಿದರು.

ಬೆಂದೂರು ಚರ್ಚ್ನ ಧರ್ಮಗುರು ಮತ್ತು ಪಾದುವ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕರು ವಂದನೀಯ ಫಾದರ್ ವಿನ್ಸೆಂಟ್ ಮೊಂತೇರೊ, ಪಾದುವ ಕಾಲೇಜಿನ ಪ್ರಾಂಶುಪಾಲ ವಂದನೀಯ ಫಾದರ್ ಅರುಣ್ ಲೋಬೊ ಮತ್ತು ಪಾದುವ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗ್ಲಾಡಿಸ್ ಅಲೋಶಿಯಸ್ ಮತ್ತು ಸಂಪನ್ಮೂಲ ತಂಡದ ಮುಖ್ಯಸ್ಥ, ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ), ಮಂಗಳೂರು ಇದರ ಇಂಗ್ಲಿಷ್ ವಿಭಾಗದ ಡಾ. ಅನುಪ್ ಡೆನ್ಜಿಲ್ ವೇಗಸ್ ಉಪಸ್ಥಿತರಿದ್ದರು
ಮೊದಲ ಬ್ಯಾಚ್‌ಗೆ ಜಿಲ್ಲೆಯ ೨೦೦ಕ್ಕೂ ಹೆಚ್ಚು ಆಂಗ್ಲ ಮಾಧ್ಯಮ ಶಿಕ್ಷಕರು ಉಪಸ್ಥಿತರಿದ್ದರು.

ಡಾ. ಅನುಪ್ ಡೆನ್ಜಿಲ್ ವೇಗಾಸ್ ಮಾತನಾಡಿ, “ತರಗತಿಯಲ್ಲಿ ಸಂವಹನವು ಮುಖ್ಯ ಕೀಲಿಯಾಗಿದೆ. ೫೦% ಜ್ಞಾನ ಮತ್ತು ೫೦% ಸಂವಹನ ಕೌಶಲ್ಯಗಳು ಪ್ರಭಾವಶಾಲಿ ಮತ್ತು ಪರಿಣಾಮಕಾರಿ ಬೋಧನೆಯನ್ನು ಪ್ರಸ್ತುತಪಡಿಸಲು ಸಾಕಷ್ಟು ಸಹಕಾರಿಯಾಗಿವೆ. ಒಬ್ಬ ಶಿಕ್ಷಕನು ಕೇಳುವ, ಓದುವ, ಮಾತನಾಡುವ ಮತ್ತು ಬರೆಯುವ ನಾಲ್ಕು ಸಂವಹನ ವಿಧಾನಗಳಲ್ಲಿ ಪ್ರವೀಣನಾಗಿರಬೇಕು ಮತ್ತು ಶಾಲೆಯ ಪರಿಸರದಲ್ಲಿ ಈ ಪ್ರಾವೀಣ್ಯತೆಯನ್ನು ಪರಿಣಾಮಕಾರಿಯಾಗಿ ಅನ್ವಯಿಸಲು ಉತ್ಸುಕನಾಗಿರಬೇಕು.

“ಇಂದು, ಹೆಚ್ಚಿನ ಪೋಷಕರು ಪದವೀಧರರು ಅಥವಾ ಸ್ನಾತಕೋತ್ತರ ಪದವೀಧರರಾಗಿದ್ದಾರೆ. ನಾವು, ಶಿಕ್ಷಕರಾಗಿ, ಆ ವಿದ್ಯಾವಂತ ಪೋಷಕರೊಂದಿಗೆ ಮತ್ತು ಅವರ ಮಕ್ಕಳೊಂದಿಗೆ ಪರಿಣಾಮಕಾರಿಯಾಗಿ ಸಂವಹನ ನಡೆಸುವಲ್ಲಿ ವಿಫಲರಾಗಿದ್ದೇವೆ” ಎಂದು ಡಾ. ಅನುಪ್ ಹೇಳಿದರು.

“ಕಥೊಲಿಕ್ ಶಿಕ್ಷಣ ಮಂಡಳಿಯು ನೋಂದಾಯಿತ ಶಿಕ್ಷಣ ಸಂಸ್ಥೆಯಾಗಿದ್ದು, ಸತತ ೯೦ ವರ್ಷಗಳ ಫಲಪ್ರದ ಸೇವೆಯನ್ನು ಪೂರ್ಣಗೊಳಿಸುತ್ತದೆ. ಇದು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ೧೯೩೨ ರಲ್ಲಿ ಪ್ರಾರಂಭವಾಯಿತು. ಇತ್ತೀಚೆಗೆ, ಉಡುಪಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳನ್ನು ವಿಭಜಿಸಿ ಪ್ರತ್ಯೇಕವಾಗಿ ನಿರ್ವಹಿಸಲಾಗಿದೆ” ಎಂದು ಫಾದರ್ ಆ್ಯಂಟನಿ ಸೆರಾ ತಿಳಿಸಿದರು.

ಮಂಗಳೂರಿನ ಸೇಂಟ್ ಆಗ್ನೆಸ್ ಪಿಯು ಕಾಲೇಜಿನ ಇಂಗ್ಲಿಷ್ ಉಪನ್ಯಾಸಕಿ ಶ್ರೀಮತಿ ಜೋನ್ ಶೀತಲ್ ಮತ್ತು ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕಿ ಪ್ರಮೀಳಾ ಡಿಸೋಜಾ ಸಂಪನ್ಮೂಲ ತಂಡದಲ್ಲಿದ್ದರು.